ಶಿವಮೊಗ್ಗ: ಅಪಘಾತಕ್ಕೀಡಾಗಿ ಉರುಳಿಬಿದ್ದ ಪೊಲೀಸ್ ಜೀಪ್

Update: 2020-09-03 10:09 GMT

ಶಿವಮೊಗ್ಗ, ಸೆ.3: ಶಿವಮೊಗ್ಗ ತುಂಗಾ ನಗರ ಠಾಣೆ ಪಿಎಸ್ಸೈ ತಿರುಮಲೇಶ್ ಗಸ್ತು ತಿರುಗುತ್ತಿದ್ದ ವೇಳೆ ಜೀಪ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಜೀಪ್ ಉರುಳಿದ ಬಿದ್ದ ಘಟನೆ ಇಂದು ಅಪರಾಹ್ನ ನಡೆದಿದೆ.

ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ತುಂಗಾನಗರ ಪೊಲೀಸ್ ಠಾಣೆ ಪಿಎಸ್ಸೈ ತಿರುಮಲೇಶ್ ಹಾಗೂ ಚಾಲಕ ಸುನೀಲ್ ಗಸ್ತು ತಿರುಗುತ್ತಿದ್ದರು. ಈ ವೇಳೆ ಅತಿವೇಗದಿಂದ ಬಂದ ಕಾರು ಪೊಲೀಸ್ ಜೀಪಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಜೀಪ್ ಮಗಚಿ ಬಿದ್ದಿದೆ. ಈ ಘಟನೆಯಿಂದ ಯಾರಿಗೂ ಪ್ರಾಣ ಹಾನಿ ಹಾಗಿಲ್ಲ.

ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News