ಪ್ರೇಯಸಿಯ ಸಾವಿನಿಂದ ನೊಂದ ಯುವಕ ಆತ್ಮಹತ್ಯೆ

Update: 2020-09-03 11:49 GMT

ಬೀದರ್, ಸೆ.3: ಪ್ರೇಯಸಿಯ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಮೊಬೈಲ್ ಟವರ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಹುಮನಾಬಾದ್ ಪಟ್ಟಣದ ಹೊರವಲಯದ ವಾಂಜರಿ ಗ್ರಾಮದ ನಾಗೇಶ್‍ ರೆಡ್ಡಿ(24) ಮೃತಯುವಕ. ನಾಗೇಶ್ ಪ್ರೀತಿಸುತ್ತಿದ್ದ ಯುವತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಳು. ಇದರಿಂದ ಮಾನಸಿಕವಾಗಿ ಕುಗ್ಗಿದ್ದ ಯುವಕ, ಪ್ರೇಯಸಿ ಅಂತ್ಯ ಸಂಸ್ಕಾರ ಮಾಡಿದ ಸ್ಮಶಾನದಲ್ಲಿನ ಮೊಬೈಲ್ ಟವರ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇವರಿಬ್ಬರ ಪ್ರೀತಿ ವಿಚಾರ ಇತ್ತೀಚೆಗಷ್ಟೇ ಬಯಲಾಗಿತ್ತು. ಈ ನಡುವೆ ಯುವತಿ ಅನಾರೋಗ್ಯದಿಂದ ಸಾವನಪ್ಪಿದ್ದಳು. ಯುವತಿಯ ಅಗಲಿಕೆ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಲವ್ ಕಹಾನಿ ಸುದ್ದಿ ವೈರಲ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News