ದಲಿತರ ಮೇಲೆ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಆಗ್ರಹ

Update: 2020-09-03 13:01 GMT

ಬೆಂಗಳೂರು, ಸೆ. 3: ಕೆಜಿಎಫ್‍ನ ದಲಿತ ಸಮುದಾಯ ಶಿವರಾಮಪ್ಪನ ಮೇಲೆ ಮಾರಣಾಂತಿಕ ಹಲ್ಲೆ, ವಿಜಯಪುರದ ದಲಿತ ಯುವಕನ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಲ್ಲದೆ, ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ಗಲಭೆ ಮೂಲ ಕಾರಣಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ(ಭೀಮಶಕ್ತಿ) ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದೆ.

ಗುರುವಾರ ಈ ಸಂಬಂಧ ಇಲ್ಲಿನ ಜೀವನ್‍ಭೀಮಾ ನಗರ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಮೂಲಕ ಮನವಿ ಸಲ್ಲಿಸಿದ್ದು, ಮೇಲ್ಕಂಡ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಗುರಿಯಾದ ಸಂತ್ರಸ್ತರಿಗೆ ರಾಜ್ಯ ಸರಕಾರ ಸೂಕ್ತ ಪರಿಹಾರ ಕಲ್ಪಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಇಂತಹ ದೌರ್ಜನ್ಯ, ಹಲ್ಲೆ, ಕೊಲೆ ಪ್ರಕರಣಗಳು ಸಂಭವಿಸಿದಂತೆ ಸೂಕ್ತ ಮುನ್ನಚ್ಚರಿಕೆ ವಹಿಸಬೇಕು ಎಂದು ಸಮಿತಿ ರಾಜ್ಯಾಧ್ಯಕ್ಷ ಹೆಬ್ಬಾಳ ವೆಂಕಟೇಶ್ ಕೋರಿದ್ದಾರೆ.

ಈ ವೇಳೆ ಪ್ರಧಾನ ಕಾರ್ಯದರ್ಶಿ ಸ್ವಾಮಿವೇಲು, ಮುಖಂಡರಾದ ಎಚ್‍ಎಎಲ್ ಚಂದ್ರು, ಅಮಲಾ, ಪಳನಿ, ಶಿವಕುಮಾರ್, ಚನ್ನಯ್ಯ, ಗಜೇಂದ್ರ ಸೇರಿದಂತೆ ಸ್ಥಳೀಯ ಘಟಕದ ಪದಾಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News