ಮೈಸೂರು : ಭೂ ಸುಧಾರಣಾ ಕಾಯ್ದೆ ಕುರಿತು ವಿಚಾರಗೋಷ್ಠಿ, ಸಂವಾದ ಕಾರ್ಯಕ್ರಮ

Update: 2020-09-05 10:06 GMT

ಮೈಸೂರು, ಸೆ. 5: ಭೂ ಸುಧಾರಣಾ ಕಾಯ್ದೆ  ತಿದ್ದುಪಡಿ ಖಾಸಗೀಕರಣ ನೀತಿಗಳು ಪರಣಾಮ ಮತ್ತು ಸವಾಲುಗಳು ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮವನ್ನು ಶನಿವಾರ ಖ್ಯಾತ ಸಾಹಿತಿ ದೇವನೂರ ಮಹಾದೇವ ರೈತರಿಗೆ ಮಣ್ಣು ನೀಡುವ ಮೂಲಕ ಉದ್ಘಾಟಿಸಿದರು.

ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಕನಕ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಸ್ವರಾಜ್ ಇಂಡಿಯಾ, ಜನಾಂದೋಲನ ಮಹಾಮೈತ್ರಿ, ಚನಚೇತನ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾ ಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಐದುನೂರಕ್ಕೂ ಹೆಚ್ಚು ರೈತ ಸಂಘ ಮತ್ತು ದಸಂಸ ದ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಚಾಮರಸ ಮಾಲೀ ಪಾಟಿಲ್, ಆಲಗೂಡು ಶಿವಕುಮಾರ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಬೆಟ್ಟಯ್ಯಕೋಟೆ, ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News