ಶಾಂತಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Update: 2020-09-06 12:24 GMT

ತೊಕ್ಕೊಟ್ಟು, ಸೆ. 6: ಇಲ್ಲಿಗೆ ಸಮೀಪದ ಶಾಂತಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯು ಶನಿವಾರ ನಡೆಯಿತು.

ಸಂಸ್ಥೆಯ ಉಪಾಧ್ಯಕ್ಷ ಕೆ.ಎಂ. ಅಶ್ರಫ್, ಶಾಲಾ ಸಂಚಾಲಕ ಅಬ್ದುಲ್ ರಹಮಾನ್ ಮಾತನಾಡಿದರು. ಈ ಸಂದರ್ಭ ಸಂಸ್ಥೆಯ ಶಿಕ್ಷಕಿ ಆಯಿಶಾ ಯು.ಕೆ. ಅವರ ‘ಗೋಡೆ ಕಟ್ಟುವವರು’ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಹಿರಾ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಶಿಕ್ಷಕೇತರ ಬೃಂದದವರು ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಕರೀಮ್ ಸ್ವಾಗತಿಸಿದರು. ಸಂಚಾಲಕ ರಹ್ಮತ್ತುಲ್ಲಾ ವಂದಿಸಿದರು. ಜಿಶ್ರಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News