ಚೂರಿಯಿಂದ ಇರಿದು ಯುವಕನ ಕೊಲೆಗೈದ ನಿವೃತ್ತ ಸೈನಿಕ

Update: 2020-09-07 12:17 GMT

ಧಾರವಾಡ ಸೆ.7: ತಿಪ್ಪೆ ಹಾಕುವ ಜಾಗದ ವಿಚಾರದಲ್ಲಿ ನಿವೃತ್ತ ಸೈನಿಕನೊಬ್ಬ ಯುವಕನ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

ಕಲಘಟಗಿ ತಾಲೂಕಿನ ಕಲಕುಂಡಿ ಗ್ರಾಮದ ಜಗದೀಶ್ ಹನಮಂತಪ್ಪ ತಾಂಬೆ ಎಂಬ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ದೇವಿಕೊಪ್ಪ ಗ್ರಾಮದ ನಿವೃತ್ತ ಸೈನಿಕ ಗಂಗಾಧರ ನಿಂಗಪ್ಪ ನೂಲ್ವಿ ಹಾಗೂ ಶಾರದಾ ಪಾಟೀಲ್ ಸೇರಿಕೊಂಡು ಯುವಕನ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಮಹಿಳೆಯೊಬ್ಬರ ಪ್ರಚೋದನೆಯಿಂದ ಯುವಕನನ್ನು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಕಳೆದ ವರ್ಷವಷ್ಟೇ ಸೇನೆಯಿಂದ ನಿವೃತ್ತಿಯಾಗಿದ್ದ ಗಂಗಾಧರ ಹಾಗೂ ಶಾರದಾ ಪಾಟೀಲ್‍ರನ್ನ ಕಲಘಟಗಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News