ಅಕ್ರಮ ಗಣಿಗಾರಿಕೆ ಮೇಲೆ ದಾಳಿ: ಯಂತ್ರೋಪಕರಣಗಳ ವಶ

Update: 2020-09-07 18:17 GMT

ಪಾಂಡವಪುರ, ಸೆ.7: ತಾಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಹಿರಿಯ ಭೂ ವಿಜ್ಞಾನಿ ಟಿ.ವಿ. ಪುಷ್ಟಾ ನೇತೃತ್ವದಲ್ಲಿ ರವಿವಾರ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಬೇಬಿಬೆಟ್ಟ ಕಾವಲ್ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಜಿಲ್ಲಾಡಳಿತ ನಿಷೇಧಿಸಿದ್ದರೂ ಕೆಲವು ಗಣಿ ಮಾಲಕರು ರಾತ್ರಿ ವೇಳೆ ಕದ್ದುಮುಚ್ಚಿ ಗಣಿಗಾರಿಕೆಯಲ್ಲಿ ತೊಡಗಿದ್ದ ವಿಷಯ ತಿಳಿದ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ತೆರಳಿ ಹಿಟಾಚಿ, ಕಲ್ಲು ಕೊರೆಯುವ ಬ್ರೇಕರ್, ಟ್ರ್ಯಾಕ್ಟರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದರು. 

ದಾಳಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಟಶೇಖರ್, ಅರುಣ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News