ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಎಚ್.ವಿಶ್ವನಾಥ್

Update: 2020-09-08 14:49 GMT

ಬೆಂಗಳೂರು, ಸೆ.8: ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‍ರಚನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಮಾಧಿಕಾರ. ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪುನರುಚ್ಚರಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಲು ನಾನು ಆಕಾಂಕ್ಷಿಯಾಗಿದ್ದು, ನಾನೇಕೆ ಸಚಿವನಾಗಬಾರದು? ಅವಕಾಶ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ. ಸಚಿವ ಸಂಪುಟ ಯಾವಾಗ ವಿಸ್ತರಣೆ ಆಗುತ್ತದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡ್ರಗ್ಸ್ ಎಲ್ಲಿಂದ ಬರುತ್ತೆ? ಯಾರು ಮಾರಾಟ ಮಾಡುತ್ತಾರೆ? ಅನ್ನೋದರ ಬಗ್ಗೆ ಸಂಪ್ರರ್ಣ ಮಾಹಿತಿ ಪೊಲೀಸರಿಗೆ ಮಾತ್ರ ಗೊತ್ತಿರುತ್ತದೆ. ಹಾಗಾಗಿ, ಪೊಲೀಸ್ ಇಲಾಖೆ ಮಾತ್ರ ಇದಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News