ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-09-08 15:05 GMT

ಅಜೆಕಾರು, ಸೆ.8: ಕೆಲಸ ಇಲ್ಲದೆ ಮದ್ಯ ಸೇವಿಸುವ ಚಟ ಹೊಂದಿದ್ದ ಮರ್ಣೆ ಗ್ರಾಮದ ಕಾಡುಹೊಳೆ ನಿವಾಸಿ ಸುರೇಶ್ ನಾಯ್ಕ್ (43) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಸೆ.7ರಂದು ಬೆಳಗ್ಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡ ಹಿರಿಯಡ್ಕ ಪೆರ್ನಿಮನೆ ನಿವಾಸಿ ಗೋವಿಂದ ಕಾಮತ್ ಎಂಬವರ ಪತ್ನಿ ಸವಿತಾ ಕಾಮತ್ (60) ಎಂಬವರು ಸೆ.7ರಂದು ಸಂಜೆ ವೇಳೆ ಮನೆ ಸಮೀಪದ ಹಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News