ಮಂಗಳೂರು : "ಚಂದನ" ಕವನ ಸಂಕಲನ ಬಿಡುಗಡೆ ಸಮಾರಂಭ
Update: 2020-09-09 07:17 GMT
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆಯ ವತಿಯಿಂದ ನಡೆಯುವ ಸರಣಿ ಕಾರ್ಯಕ್ರಮದ ಅಂಗವಾಗಿ 25ನೇ ಕಾರ್ಯಕ್ರಮ "ಚಂದನ" ಸಂಪಾದಿತ ಕವನ ಸಂಕಲನ ಬಿಡುಗಡೆ ಸಮಾರಂಭವು ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರು "ಚಂದನ" ಕೃತಿ ಬಿಡುಗಡೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ವಹಿಸಿದ್ದರು.
"ಚಂದನ" ಕೃತಿಯ ಸಂಪಾದಕರಾದ ಸಾಹಿತಿ, ನಟ, ನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ಉಪಸ್ಥಿತರಿದ್ದರು."ಅಮೃತ ಪ್ರಕಾಶ" ಪತ್ರಿಕೆಯ ಉಪಸಂಪಾದಕರಾದ ಸಾಹಿತಿ, ನಟ ಡಾ. ಕಾಸರಗೋಡು ಅಶೋಕ್ ಕುಮಾರ್ ಸ್ವಾಗತಿಸಿ, ವಂದಿಸಿದರು.