ಕಡಬ : ಯುವಕ ನಾಪತ್ತೆ

Update: 2020-09-09 11:19 GMT

ಕಡಬ : ಕೆಲಸಕ್ಕೆಂದು ತೆರಳಿದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಠಾಣೆ ವ್ಯಾಪ್ತಿಯ ಬಲ್ಯದಿಂದ ವರದಿಯಾಗಿದೆ.

ಬಲ್ಯ ಗ್ರಾಮದ ದೇರಾಜೆ ಎಂಬಲ್ಲಿರುವ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇರಾಜೆ ನಿವಾಸಿ ಚಂದ್ರಶೇಖರ್ (23) ಎಂಬವರು ಸೆ. 4 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ.

ಮೊಬೈಲನ್ನು ಮನೆಯಲ್ಲೇ ಬಿಟ್ಟು ಬೈಕಿನಲ್ಲಿ ತೆರಳಿದ್ದು, ನನ್ನನ್ನು ಹುಡುಕಬೇಡಿ ಹುಡುಕಿದರೆ ಜೀವಂತವಾಗಿ ಇರುವುದಿಲ್ಲ ಎಂದು ಮೊಬೈಲ್‌ ಕೆಳಗಡೆ ಚೀಟಿ ಬರೆದಿಟ್ಟು ನಾಪತ್ತೆಯಾಗಿರುವುದಾಗಿ ಆತನ ತಂದೆ ಧರ್ಣಪ್ಪ ಪೂಜಾರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News