×
Ad

ಯಕ್ಷವೈದ್ಯ ಪುರಸ್ಕಾರ ಪ್ರದಾನ

Update: 2020-09-10 18:12 IST

ಮಂಗಳೂರು, ಸೆ.10: ನಗರದ ಕದ್ರಿಯ ವತಿಯಿಂದ ಬಾಲಯಕ್ಷ ಕೂಟದ ವತಿಯಿಂದ ದ್ವಿದಿನ ಧೀಂಗಿಣ ಸಂಭ್ರಮ ಯಕ್ಷಗಾನ ಪ್ರದರ್ಶನ ಮತ್ತು ಯಕ್ಷ ವೈದ್ಯ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಿತು.

ಬಾಲಯಕ್ಷ ಕೂಟ ಗೌರವಾಧ್ಯಕ್ಷ ದಿನೇಶ್ ದೇವಾಡಿಗ ಕದ್ರಿ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಪ್ರದೀಪ್ ಕುಮಾರ್ ಕಲ್ಕೂರ ಉದ್ಯಮಿ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ಬಾಲಯಕ್ಷ ಕೂಟದ ಅಧ್ಯಕ್ಷ ಕೃಷ್ಣ ಭಟ್ ಕದ್ರಿ, ನವರಾತ್ರಿ ಸಮಿತಿಯ ಅಧ್ಯಕ್ಷ ವಿಷ್ಣುಮೂರ್ತಿ ಕುಳಾಯಿ, ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೆರಾ, ಪತ್ರಕರ್ತರ ಸಂಘದ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಒಎಂಪಿಲ್ ಸಂಸ್ಥೆಯ ಎಚ್‌ಆರ್ ವಿಭಾಗದ ಉಪ ಮಹಾಪ್ರಬಂಧಕ ಆರ್.ಕೆ.ರಾವ್ ಉಪಸ್ಥಿತರಿದ್ದರು.

ಯಕ್ಷವೈದ್ಯ ಪುರಸ್ಕಾರ: ಕೊರೋನ ಸಂಕಷ್ಟ ಕಾಲದಲ್ಲಿ ವಾರಿಯರ್ ರೀತಿ ಕೆಲಸ ಮಾಡುತ್ತಿರುವ ವೈದ್ಯರ ಪ್ರತಿನಿಧಿಯಾಗಿ ತೆಂಕು, ಬಡಗುತಿಟ್ಟಿನ ಸವ್ಯಸಾಚಿ ಕಲಾವಿದ, ಮಕ್ಕಳ ತಜ್ಞ ಡಾ.ಸುನೀಲ್ ಮುಂಡ್ಕೂರ್‌ಗೆ ಯಕ್ಷ ವೈದ್ಯ ಪುರಸ್ಕಾರ ಪ್ರದಾನ ಮಾಡಲಾಯಿತು. ಸಂಚಾಲಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾರೋಪ: ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಕಾಯದರ್ಶಿ ಪುರುಷೋತ್ತಮ ಭಂಡಾರಿ ಸಮಾರೋಪ ಭಾಷಣ ಮಾಡಿದರು. ಉದ್ಯಮಿ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ದಿನೇಶ್ ದೇವಾಡಿಗ ಕದ್ರಿ, ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೆರ ಉಪಸ್ಥಿತರಿದ್ದರು. ಯಕ್ಷಕೂಟದ ಜಿತೇಂದ್ರ ಕುಂದೇಶ್ವರ ಸ್ವಾಗತಿಸಿದರು. ಒಎಂಪಿಲ್ ಎಚ್‌ಆರ್ ವಿಭಾಗದ ಉಪ ಮಹಾಪ್ರಬಂಧಕ ಆರ್.ಕೆ.ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News