ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
Update: 2020-09-10 19:49 IST
ಉಡುಪಿ, ಸೆ.10: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಟಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬುಧವಾರ ಮಣಿಪಾಲ ನಗರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ 34 ಪ್ರಕರಣ ದಾಖಲಿಸಿದ್ದು, 4600 ರೂ. ದಂಡ ವಸೂಲಿ ಮಾಡಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಪರೀಕ್ಷಣಾಧಿಕಾರಿ ವಿಶ್ವನಾಥ ಬೈರಿ ಹಾಗೂ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.