ಲಂಚ ಪಡೆಯುವಾಗ ಗ್ರಾ.ಪಂ. ಕಾರ್ಯದರ್ಶಿ ಎಸಿಬಿ ಬಲೆಗೆ

Update: 2020-09-10 14:44 GMT

ಶಿವಮೊಗ್ಗ, ಸೆ.10: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಬಿಡುಗಡೆ ಮಾಡಲು ಲಂಚ ಪಡೆಯುವಾಗ ಗ್ರಾಮ ಪಂಚಾಯತ್ ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇಂದು ಹಣ ಪಡೆಯುವಾಗ ಗ್ರಾಮ ಪಂಚಾಯತ್ ಕಚೇರಿಗೆ ದಾಳಿ ನಡೆಸಿ, ಬಂಧಿಸಲಾಗಿದೆ. 

ಡಿವೈಎಸ್ಪಿ ಲೋಕೇಶ್​ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ಇನ್​ಸ್ಪೆಕ್ಟರ್ ತಿಪ್ಪೇಸ್ವಾಮಿ, ವಿರೇಂದ್ರ ಹಾಗೂ ಸಿಬ್ಬಂದಿ ಯೋಗೀಶ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News