ಕಬ್ಬನ್‍ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ

Update: 2020-09-10 17:39 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.10: ವಾಹನ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಕಬ್ಬನ್ ಉದ್ಯಾನದಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕೊರೋನ ಕಾರಣಕ್ಕೆ ಉದ್ಯಾನದ ಪ್ರವೇಶದ್ವಾರಗಳನ್ನು ಮುಚ್ಚಿ, ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಪರಿಸರವಾದಿಗಳು ಹಾಗೂ ವಾಯುವಿಹಾರಿಗಳು ವಾಹನ ಸಂಚಾರ ಸಂಪೂರ್ಣ ನಿಷೇಧಿಸುವಂತೆ ಮೌನ ಪ್ರತಿಭಟನೆ ನಡೆಸುತ್ತಿದ್ದರು.

ವಾಹನ ಸಂಚಾರ ನಿರ್ಬಂಧಿಸುವಂತೆ ಪಾಲಿಕೆ, ತೋಟಗಾರಿಕೆ ಇಲಾಖೆ ಸಚಿವ ನಾರಾಯಣಗೌಡ ಸರಕಾರಕ್ಕೆ ಮನವಿ ಮಾಡಿದ್ದರು. ಆದರೆ, ವಾಹನ ದಟ್ಟಣೆ ತಗ್ಗಿಸಲು ಉದ್ಯಾನದಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡುವಂತೆ ಸಂಚಾರ ಪೊಲೀಸರು ತೋಟಗಾರಿಕೆ ಇಲಾಖೆಗೆ ಮನವಿ ಮಾಡಿದ್ದರು. ಸರಕಾರದ ಸೂಚನೆ ಮೇರೆಗೆ ಉದ್ಯಾನದಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್) ಗುಣವಂತ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News