ಕೇಂದ್ರ ಸಚಿವ ಸುರೇಶ್ ಅಂಗಡಿ, ಶಾಸಕ ಎಸ್.ಆರ್. ವಿಶ್ವನಾಥ್‍ಗೆ ಕೊರೋನ ಪಾಸಿಟಿವ್

Update: 2020-09-11 12:38 GMT

ಬೆಂಗಳೂರು, ಸೆ.11: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಶುಕ್ರವಾರ ಕೊರೋನ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ನಾನು ಕೋವಿಡ್19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ' ಎಂದು ತಿಳಿಸಿದ್ದಾರೆ.

ಎಸ್.ಆರ್. ವಿಶ್ವನಾಥ್‍ ಗೆ ಪಾಸಿಟಿವ್

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್‍ಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದಾರೆ.

ನಾನು ಕೊರೋನ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ವಿಶ್ವನಾಥ್ ವಿವರಿಸಿದ್ದಾರೆ.

ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್‍ನಲ್ಲಿದ್ದು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದು ವಿಶ್ವನಾಥ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News