ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ: ಇಬ್ಬರ ವಿರುದ್ಧ ಎಫ್‍ಐಆರ್

Update: 2020-09-11 17:55 GMT

ಬೆಂಗಳೂರು, ಸೆ.11: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡಿದ ಆರೋಪದಡಿ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆಗೀಡಾಗಿರುವ ಪ್ರವೀಣ್‍ ಕುಮಾರ್ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ರೈಲ್ವೆ ಇಲಾಖೆ ಉದ್ಯೋಗಿ ಚಮನ್‍ ಸಿಂಗ್ ಹಾಗೂ ನಿವೃತ್ತ ಸರಕಾರಿ ನೌಕರ ತಿಮ್ಮಯ್ಯ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಂಪನಿ ಉದ್ಯೋಗಿ ಪ್ರವೀಣ್ ಅವರಿಗೆ ಮೂರು ವರ್ಷಗಳ ಹಿಂದೆ ಆರೋಪಿಗಳ ಪರಿಚಯವಾಗಿತ್ತು. ರೈಲ್ವೆ ಇಲಾಖೆಯ ಸಿ ಗ್ರೂಪ್ ನೌಕರ ಹುದ್ದೆ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು, 3 ಲಕ್ಷ ರೂ.ಗಳನ್ನು ಮುಂಗಡವಾಗಿ ಪಡೆದಿದ್ದರು. ಇದಾದ ನಂತರ ಆರೋಪಿಗಳು, ಕೆಲಸ ಕೊಡಿಸಿಲ್ಲ. ಹಣವನ್ನೂ ವಾಪಸ್ಸು ನೀಡದೆ, ಅವರಿಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News