ಹೆಣ್ಣೆಂದು 7 ಮಗುವನ್ನು ಬಕೆಟ್ ನೀರಿಗೆ ಮುಳುಗಿಸಿ ಹತ್ಯೆ: ಆರೋಪಿಯ ತಂದೆಯ ಬಂಧನ

Update: 2020-09-12 08:18 GMT

ಚಿಕ್ಕಮಗಳೂರು, ಸೆ.12: ಏಳು ತಿಂಗಳ ಹೆಣ್ಣು ಮಗುವನ್ನು ನೀರು ತುಂಬಿದ್ದ ಬಕೆಟ್‌ನಲ್ಲಿ ಮುಳುಗಿಸಿ ಕೊಂದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ವಕೀಲನಾಗಿರುವ ಉಮಾಶಂಕರ್ ಬಂಧಿತ ಆರೋಪಿ. ಈತ ಮೂರು ವರ್ಷಗಳ ಹಿಂದೆ ಮಂಜುಳಾ ಎಂಬವರನ್ನು ಪ್ರೀತಿಸಿ ಎರಡನೇ ಮದುವೆಯಾಗಿದ್ದನೆನ್ನಲಾಗಿದೆ. ಮಂಜುಳಾಗೆ ಏಳು ತಿಂಗಳ ಹಿಂದೆ ಹೆಣ್ಣು ಮಗು ಹುಟ್ಟಿತ್ತು. ಹೆಣ್ಣು ಮಗು ಜನಿಸಿದ ಕಾರಣಕ್ಕೆ ಮಂಜುಳಾಗೆ ಉಮಾಶಂಕರ್ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಗುರುವಾರ ತಾನು ಕೆಲಸಕ್ಕೆ ಹೋದ ಸಂದರ್ಭ ಉಮಾಶಂಕರ್ ಮಗುವನ್ನು ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ ಎಂದು ಮಗುವಿನ ತಾಯಿ ಮಂಜುಳಾ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಡೂರು ಪೊಲೀಸರು ಆರೋಪಿ ಉಮಾಶಂಕರ್‌ನನ್ನು ಶುಕ್ರವಾರ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News