ತಳವಾರ, ಪರಿವಾರ, ಗೊಂಡ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲು ಸಿದ್ದರಾಮಯ್ಯ ಒತ್ತಾಯ

Update: 2020-09-12 12:32 GMT

ಬೆಂಗಳೂರು, ಸೆ.12: ಕಲಬುರಗಿ ಜಿಲ್ಲೆಯ ತಳವಾರ, ಪರಿವಾರ ಹಾಗೂ ಗೊಂಡ ಸಮುದಾಯದವರಿಗೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ತಳವಾರ, ಪರಿವಾರ ಸಮುದಾಯದ ಮುಖಂಡರು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಕಲಬುರಗಿಯಲ್ಲಿ ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ನೀಡುತ್ತಿಲ್ಲ. ಇದರಿಂದ ಸಮುದಾಯದ ಜನತೆ ಸಾಕಷ್ಟು ರೀತಿಯಲ್ಲಿ ಅವಕಾಶ ವಂಚಿತರಾಗುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆ ಹರಿಸಿಕೊಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸ್ಥಳದಲ್ಲಿಯೇ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತಳವಾರ, ಪರಿವಾರ ಹಾಗೂ ಗೊಂಡ ಸಮುದಾಯದ ಜನತೆಗೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News