ಬಿಬಿಎಂಪಿ ಚುನಾವಣೆ ವಿಳಂಬ: ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Update: 2020-09-12 14:23 GMT

ಬೆಂಗಳೂರು, ಸೆ.12: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಬಿಬಿಎಂಪಿ ಮಾಜಿ ಸದಸ್ಯ ಎಂ. ಶಿವರಾಜ್ ಮತ್ತಿತರರು ಈ ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮಕುಮಾರ್ ಅವರು ವಾದ ಮಂಡಿಸಲಿದ್ದಾರೆ.

ಸೆ.10ಕ್ಕೆ ಚುನಾಯಿತ ಸದಸ್ಯರ ಅವಧಿ ಮುಗಿದಿದ್ದು, ಇದಕ್ಕೂ ಮುನ್ನ ಚುನಾವಣೆ ನಡೆಸಿ ಹೊಸ ಸದಸ್ಯರ ಆಯ್ಕೆ ಮಾಡಬೇಕಿತ್ತು. ಆದರೆ, ಸರಕಾರ ಚುನಾವಣೆ ಮುಂದೂಡುವ ಉದ್ದೇಶದಿಂದ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದು ಆರೋಪಿಸಿರುವ ಅರ್ಜಿದಾರರು, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರ್ಟ್ ಗೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News