ಕಾಸರಗೋಡು: ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಕಾರ್ಮಿಕ ಮೃತ್ಯು

Update: 2020-09-13 05:54 GMT

ಕಾಸರಗೋಡು: ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನೀಲೇಶ್ವರ ಸಮೀಪ ನಡೆದಿದೆ.

ರಘುನಾಥ್ (55) ಮೃತರು ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಕೆಲಸ ಮುಗಿಸಿ ಮರಳುತ್ತಿದ್ದಾಗ ಮನೆ ಬಳಿ ನೀರು ತುಂಬಿದ್ದ ಕೆಂಗಲ್ಲು ಕೋರೆಗೆ ಬಿದ್ದಿದ್ದು, ಮಾಹಿತಿ ಅರಿತ ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದೆ.

ಮೃತದೇಹವನ್ನು ಕೋವಿಡ್ ತಪಾಸಣೆ ಬಳಿಕ ಮರಣೋತ್ತರ ಪರೀಕ್ಷೆ  ನಡೆಸಿ ಸಂಬಂಧಿಕರಿಗೆ ಬಿಟ್ಟುಕೊಡಲಿದೆ. ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News