ಕಡಬ: ಹಾಜಿ ಅಬ್ದುಲ್ ಖಾದರ್ ನಿಧನ
Update: 2020-09-13 07:20 GMT
ಕಡಬ : ಕಡಬ ಶೇಡಿಗುಂಡಿ ನಿವಾಸಿ ಹಾಜಿ ಎಸ್. ಅಬ್ದುಲ್ ಖಾದರ್ (67) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದರು.
ಇಲ್ಲಿನ ಟೌನ್ ಜುಮಾ ಮಸೀದಿಯ ಅಧ್ಯಕ್ಷ, ಸಮಸ್ತ ಮದ್ರಸ ಮ್ಯಾನೇಜ್ ಮೆಂಟ್ ಜಿಲ್ಲಾ ಉಪಾಧ್ಯಕ್ಷರಾಗಿ, ಕಡಬ ಮಂಡಲ ಪಂಚಾಯತ್ ಸದಸ್ಯರಾಗಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ, ಸಾಮಾಜಿಕ ರಾಜಕೀಯ, ಧಾರ್ಮಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.