ಬೆಳಗಾವಿ: ಪ್ರಯಾಣದ ವೇಳೆ ಜೀವಂತ ಗುಂಡು ಪತ್ತೆ; ಯೋಧ ವಶಕ್ಕೆ

Update: 2020-09-13 11:57 GMT
ಸಾಂದರ್ಭಿಕ ಚಿತ್ರ

ಬೆಳಗಾವಿ, ಸೆ. 13: ಜೀವಂತ ಗುಂಡು ಸಮೇತ ಪ್ರಯಾಣ ಬೆಳೆಸುತ್ತಿದ್ದ ಯೋಧನನ್ನು ಸಾಂಬ್ರಾ ವಿಮಾನ ನಿಲ್ದಾಣದ ಭದ್ರತಾ ಪಡೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯ ವಿಮಾನ ನಿಲ್ದಾಣದ ಕೆಎಸ್‍ಐಎಸ್‍ಎಫ್ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ಸುಬೇದಾರ್ ಅರುಣ್ ಭೋಸಲೆ ಬಳಿ ಒಂದು ಎಕೆ 47 ಜೀವಂತ ಗುಂಡು ಪತ್ತೆಯಾಗಿದೆ. ಜೊತೆಗೆ ಒಂದು ಇನ್ಸಾಸ್ ಫೈರ್ಡ್ ಎಂಪ್ಟಿ ಕೇಸ್ ಸಹ ದೊರೆತಿದೆ.

ಸುಬೇದಾರ್ ಅರುಣ್ ಭೋಸಲೆ ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೈನಿಕನನ್ನು ಪೊಲೀಸರು ಎಂಎಲ್‍ಐಆರ್‍ಸಿ ವಶಕ್ಕೆ ನೀಡಿದ್ದಾರೆ. ಬೆಳಗಾವಿಯ ಮರಾಠಾ ಲಘು ಪದಾತಿ ದಳದ ಅಧಿಕಾರಿಗಳು ಸೈನಿಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಕುರಿತು ಮಾರಿಹಾಳ ಪಪಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News