ಸಚಿವ ಭೈರತಿ ಬಸವರಾಜ್ ರಿಗೆ ಕೊರೋನ ಸೋಂಕು
Update: 2020-09-15 06:09 GMT
ಬೆಂಗಳೂರು, ಸೆ.15: ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೆ ಕೊರೋನ ವೈರಸ್ ಸೋಂಕು ತಗಲಿದೆ.
ಈ ಬಗ್ಗೆ ಕಳೆದ ರಾತ್ರಿ ಟ್ವೀಟ್ ಮಾಡಿರುವ ಅವರು, ತನಗೆ ಕೊರೋನ ಸೋಂಕು ತಗಲಿರುವುದು ಸೋಮವಾರ ದೃಢಪಟ್ಟಿದೆ. ತಾನು ಆರೋಗ್ಯವಾಗಿದ್ದೇನೆ. ಸದ್ಯ ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
— B.A.BASAVARAJA (@BASAVARAJAMLA) September 14, 2020
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.