ಭಟ್ಕಳದಲ್ಲಿ ಜಿಎಸ್‌ಬಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Update: 2020-09-15 04:52 GMT

ಭಟ್ಕಳ, ಸೆ.15: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ವತಿಯಿಂದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ತೇರ್ಗಡೆಗೊಂಡ ಭಟ್ಕಳ ತಾಲೂಕಿನ ಸ್ವಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾಶೀಮಠದ ಶ್ರೀ ಯಾದವೇಂದ್ರ ಸಭಾಗೃಹದಲ್ಲಿ ಜರಗಿತು.

ಸಂಪನ್ಮೂಲ ವ್ಯಕ್ತಿಗಳಾದ ವಿದ್ಯಾಂಜಲಿ ಶಾಲೆಯ ಪ್ರಾಂಶುಪಾಲೆ ಶೈಲಜಾ ಪ್ರಭು 28 ಒಟ್ಟು ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು.

 ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳ ಏಳಿಗೆಗಾಗಿ ಪಾಲಕರ ಶ್ರಮ ಹಾಗೂ ಲಭ್ಯವಿರುವ ಪ್ರಚಲಿತ ಶೈಕ್ಷಣಿಕ ಕೋರ್ಸುಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಸಮಿತಿಯ ಗೌರವಾಧ್ಯಕ್ಷ ನರೇಂದ್ರ ನಾಯಕ ಮಾತನಾಡಿ ಶುಭ ಹಾರೈಸಿದರು.

ಕಾಶಿಮಠ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಸುರೇಂದ್ರ ಕಾಮತ್ ಮಾತನಾಡಿ ವಿದ್ಯಾರ್ಥಿಗಳು ಸಮಾಜಮುಖಿಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕೃಷ್ಣರಾಯ ಪೈ, ನಾಗೇಶ ಪೈ, ದೀಪಕ ನಾಯಕ್, ಚಂದ್ರಕಾಂತ ಕಾಮತ್, ಉಪಾಧ್ಯಕ್ಷ ಗಿರಿಧರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸದಸ್ಯರಾದ ಅನಿಲ ಪೈ ಸ್ವಾಗತಿಸಿದರು. ಶ್ರೀನಾಥ ಪೈ ಕಾರ್ಯಕ್ರಮ ನಿರೂಪಿಸಿದರು. ಗುರುದಾಸ ಪ್ರಭು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News