ಶಿವಸೇನೆ ಕಾರ್ಯಕರ್ತರಿಂದ ಹಲ್ಲೆ: ನಿವೃತ್ತ ನೌಕಾಪಡೆ ಅಧಿಕಾರಿಯಿಂದ ಮಹಾರಾಷ್ಟ್ರ ರಾಜ್ಯಪಾಲರ ಭೇಟಿ

Update: 2020-09-15 16:25 GMT

ಮುಂಬೈ,ಸೆ.15: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಅಣಕಿಸಿದ್ದ ಕಾರ್ಟೂನೊಂದನ್ನು ಶೇರ್ ಮಾಡಿಕೊಂಡಿದ್ದಕ್ಕಾಗಿ ಕಳೆದ ವಾರ ಶಿವಸೇನೆ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿದ್ದ ನಿವೃತ್ತ ನೌಕಾಪಡೆ ಅಧಿಕಾರಿ ಮದನ ಶರ್ಮಾ ಅವರು ಮಂಗಳವಾರ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಷಿಯಾರಿ ಅವರನ್ನು ಭೇಟಿಯಾಗಿ ಸರಕಾರದ ವಿರುದ್ಧ ದೂರಿಕೊಂಡರು. ಕೆಲವು ಬಿಜೆಪಿ ನಾಯಕರು ಮತ್ತು ಮಾಜಿ ಯೋಧರು ಶರ್ಮಾ ಜೊತೆಯಲ್ಲಿದ್ದರು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ,ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಪುಂಡಾಟಿಕೆ ನಡೆಸುವವರನ್ನು (ಶಿವಸೇನೆ ಕಾರ್ಯಕರ್ತರು) ಮಟ್ಟಹಾಕುವ ಬದಲು ಅವರ ಬಗ್ಗೆ ಒಲವು ತೋರಿಸಲಾಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗಾಗಿ ಅವರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News