ಕೃಷಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

Update: 2020-09-15 16:56 GMT

ಗಂಗೊಳ್ಳಿ, ಸೆ.15: ಕೃಷಿ ಕೂಲಿ ಕಾರ್ಮಿಕರೊಬ್ಬರ ಮೃತದೇಹವು ಹೊಸಾಡು ಗ್ರಾಮದ ಕಂಚಗೋಡಿನ ಗದ್ದೆಯ ಬಯಲಿನಲ್ಲಿರುವ ಕೆರೆಯಲ್ಲಿ ಸೆ.14ರಂದು ಸಂಜೆ ವೇಳೆ ಪತ್ತೆಯಾಗಿದೆ.

ಮೃತರನ್ನು ಕಂಚಗೋಡು ಖಾರ್ವಿಕೇರಿಯ ನಿವಾಸಿ ಮಂಜುನಾಥ ಖಾರ್ವಿ (45) ಎಂದು ಗುರುತಿಸಲಾಗಿದೆ. ಇವರು ಸೆ.12ರಂದು ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಇವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News