ಸೆ.18ರಂದು ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿಯಿಂದ 'RESURGENCE-20' ಕಾರ್ಯಕ್ರಮ
Update: 2020-09-16 15:55 GMT
ಮಂಗಳೂರು, ಸೆ.16: ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತರ್ ರಾಷ್ಟ್ರೀಯ ಸಮಿತಿಯ ವತಿಯಿಂದ 'Resurgence-20' ಕಾರ್ಯಕ್ರಮ ಸೆ.18ರಂದು ಝೂಮ್ ಆ್ಯಪ್ ನಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ರಾತ್ರಿ 9:30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇರಳ ಮುಸ್ಲಿಮ್ ಜಮಾಅತ್ ಪ್ರಧಾನ ಕಾರ್ಯದರ್ಶಿ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್ ಬುಖಾರಿ ತಂಙಳ್ ಅವರು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲಾ ಸಹಾಯಕ ಖಾಝಿ ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಅವರ ದುಅದೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮ ವನ್ನು ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಕಾರ್ಯಕ್ರಮದ ಕನ್ವೀನರ್ ರಹೀಮ್ ಸಅದಿ ಖತರ್ ಹಾಗೂ ಇಕ್ಬಾಲ್ ಬರಕ ಒಮಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.