ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿಗೆ

Update: 2020-09-17 09:52 GMT

ಹೊಸದಿಲ್ಲಿ, ಸೆ. 17: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ಹೊಸದಿಲ್ಲಿಗೆ ಆಗಮಿಸಿದ್ದಾರೆ.

ಸುಮಾರು ಆರು ತಿಂಗಳ ನಂತರ ರಾಷ್ಟ್ರದ ರಾಜಧಾನಿಗೆ ಆಗಮಿಸಿದ ಅವರನ್ನು ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಶಂಕರ ಗೌಡ ಪಾಟೀಲ್ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ  ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಾನು ದಿಲ್ಲಿಗೆ ಆಗಮಿಸಿರುವುದಾಗಿ ತಿಳಿಸಿದರು.

ಎರಡು ದಿನಗಳ ತಮ್ಮ ಭೇಟಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಳಗೊಂಡಂತೆ ಪ್ರಮುಖ ಕೇಂದ್ರ ಸಚಿವರನ್ನು ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರೂ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದ ಯಡಿಯೂರಪ್ಪ, ಪಕ್ಷದ ಗಣ್ಯರೊಂದಿಗೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸುವ ತಮ್ಮ ಇಂಗಿತವನ್ನು ಬಹಿರಂಗಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News