ಪ್ರಧಾನಿ ಮೋದಿ ಹುಟ್ಟುಹಬ್ಬ: 25 ಗೋವುಗಳ ದತ್ತು ಸ್ವೀಕಾರ

Update: 2020-09-17 12:31 GMT

ಬ್ರಹ್ಮಾವರ, ಸೆ.17: ಪ್ರಧಾನಿ ನರೇಂದ್ರ ಮೋದಿ ಅವರ 70ನೆ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ, ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿ ಯಶ್ಪಾಲ್ ಸುವರ್ಣ ಇಂದು ನೀಲಾವರ ಗೋಶಾಲೆಯ 25 ಗೋವುಗಳನ್ನು ದತ್ತು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನೀಲಾವರ ಗೋಶಾಲೆಯ ಪ್ರೇರಕಶಕ್ತಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗೋವುಗಳನ್ನು ದತ್ತು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯ ದರ್ಶಿ ಅಕ್ಷಿತ್ ಶೆಟ್ಟಿ ಹೆರ್ಗ, ಗೋವಿಗಾಗಿ ಮೇವು ಅಭಿಯಾನದ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ, ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

ಪ್ರಬಲ ಕಾಯಿದೆಗೆ ಒತ್ತಾಯ:  ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಗೋಹತ್ಯಾ ನಿಷೇಧ ಕಾಯಿದೆ ಅತ್ಯಂತ ದುರ್ಬಲವಾಗಿದ್ದು, ಇದರಿಂದ ಗೋಹತ್ಯೆ ಹಾಗೂ ಗೋವುಗಳ ಕಳವು ನಿರಂತರವಾಗಿ ನಡೆಯುತ್ತಿದೆ. ಇಂತಹ ಕೃತ್ಯಗಳ ತಡೆಗೆ ಗೋಹತ್ಯಾ ನಿಷೇಧ ಕಾಯ್ದೆಯನ್ನು ಪ್ರಬಲ ಗೊಳಿಸಬೇಕು ಎಂದು ಪೇಜಾವರಶ್ರೀಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದೇ ತಿಂಗಳು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಯ್ದೆಯನ್ನು ಬಲಗೊಳಿಸಿ ಮಂಡಿಸಿ ಜಾರಿಗೊಳಿಸುವಂತೆ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News