ಕೊರೋನ ವಾರಿಯರ್ಸ್ ಸಮಸ್ಯೆ ಪರಿಹರಿಸಿ: ರಮೇಶ್ ಕಾಂಚನ್

Update: 2020-09-17 12:32 GMT

ಉಡುಪಿ, ಸೆ.17: ವೈದ್ಯರು ಮುಷ್ಕರ ಹೂಡಿದರೆ ಕೋವಿಡ್ ಸಂಬಂಧಿತ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದ್ದು ಸರಕಾರ ರೋಗಿಗಳ ಜೀವನದಲ್ಲಿ ಆಟವಾಡದೆ ವೈದ್ಯಾಧಿಕಾರಿಗಳ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕಾಂಗ್ರೆಸ್ ಮುಖಂಡ, ನಗರಸಭಾ ಸದಸ್ಯ ರಮೇಶ್ ಕಾಂಚ್ ಸರಕಾರವನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರಕಾರದ ಆರೋಗ್ಯ ಯೋಜನೆ ಮಾದರಿಯಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಹಗಲಿರುಳು ದುಡಿಯುತ್ತಿರುವ ವೈದ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಗಳು ಸರಕಾರದ ಮುಂದೆ ಮನವಿ ಮಾಡಿದ್ದರೂ ಸರಕಾರ ಅಸಡ್ಡೆ ತೋರುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ವೈದ್ಯಾಧಿಕಾರಿಗಳು ಸೆ.15ರಿಂದ ಹಂತ ಹಂತವಾಗಿ ಮುಷ್ಕರ ನಡೆಸಲು ಆರಂಭಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News