ಉಳ್ಳಾಲ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Update: 2020-09-17 15:01 GMT

ಉಳ್ಳಾಲ: ಪ್ರಧಾ‌ನಿ ಮೋದಿಯವರ  70 ನೇ ಜನ್ಮದಿನದ ಅಂಗವಾಗಿ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಹೆಮಂತ್ ಶೆಟ್ಟಿ, ನವೀನ್ ಪಾದಲ್ಪಾಡಿ, ಉಪಾಧ್ಯಕ್ಷ ಯಶವಂತ ಅಮೀನ್, ಖಜಾಂಚಿ ಹಾಗೂ ಕೋಟೆಕಾರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಸಚಿನ್ ಮೋರೆ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರವಿ ಸೊವುರು ಕಾರ್ಯದರ್ಶಿ ಭರತ್ ರಾಜ್ ಗಟ್ಟಿ, ಮುಖಂಡರಾದ ಸಂಜೀವ ಶೆಟ್ಟಿ ಅಂಬ್ಲಮೊಗರು, ಚಂದ್ರಹಾಸ ಅಡ್ಯಂತಾಯ, ಚರಣ್ ರಾಜ್, ಸುಮಲತ, ನವೀನ್ ಶೆಟ್ಟಿ ಕುರ್ನಾಡು, ಪುರುಷೋತ್ತಮ ಗಟ್ಟಿ, ಪ್ರವೀಣ್ ಕೊಂಡಾಣ ಕೀಶೊರ್ ಮುನ್ನೂರು ಕ್ಷೇತ್ರ ಮಾದ್ಯಮ ಪ್ರಮುಖ್ ಪುರುಷೋತ್ತಮ ಕಲ್ಲಾಪು, ಸಾಮಾಜಿಕ ಜಾಲತಾಣದ ಅತುಲ್ ಬಗಂಬಿಲ ಹಾಗೂ ಇನ್ನಿತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News