ಟೆಂಪೋ ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Update: 2020-09-17 16:34 GMT

ಪುತ್ತೂರು : ಟೆಂಪೋ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಎಂಬಲ್ಲಿ ನಡೆದಿದೆ.

ಗಾಯಾಳು ಸ್ಕೂಟರ್ ಸವಾರ ಪುತ್ತೂರಿನ ಬನ್ನೂರು ಆರ್‍ಟಿಒ ಕಚೇರಿಯ ಬಳಿ ಕೆಲಸ ನಿರ್ವಹಿಸುತ್ತಿರುವ ಪುತ್ತೂರು ತಾಲೂಕಿನ ಮುಕ್ವೆ ನಿವಾಸಿ ಮಹಮ್ಮದ್ ಅಕ್ಷಮ್ (26) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಮುಂಭಾಗ ನಜ್ಜುಗುಜ್ಜಾಗಿದೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News