ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2020-09-17 16:43 GMT

ಮಂಡ್ಯ, ಸೆ17: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಸಮೀಪದ ಐಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎನ್. ಅಣ್ಣೇಗೌಡ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶುಂಠಿ ಬೆಳೆಯುವ ಸಲುವಾಗಿ ವಿಜಯ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಲೇವದೇವಿದಾರರಿಂದ ಮೂರು ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಸಲುವಿಜಯ ಬ್ಯಾಂಕ್ ನಿಂದ ಸಾಲ ಮರುಪಾವತಿ ಮಾಡುವಂತೆ ನೊಟೀಸ್ ಬಂದಿತ್ತು ಎನ್ನಲಾಗಿದೆ.

ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News