ಪ್ರಧಾನಿ ಮೋದಿ ಜನ್ಮದಿನ: ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್ ಶೆಟ್ಟಿ

Update: 2020-09-17 16:46 GMT

ಕೊಣಾಜೆ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಪ್ಲಾಸ್ಮಾ ದಾನ ಮಾಡಿದರು.

ಕೋವಿಡ್ 19 ನಿಂದ ಗುಣಮುಖರಾಗಿರುವ ವ್ಯಕ್ತಿಗಳ ಪ್ಲಾಸ್ಮಾವನ್ನು ಕೋವಿಡ್ 19 ಸೋಂಕಿತರಿಗೆ ನೀಡುವುದರಿಂದ ಸೋಂಕಿತರು ಶೀಘ್ರ ಗುಣಮುಖರಾಗುತ್ತಾರೆ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದು, ಈ ನಿಟ್ಟಿನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಗುರುವಾರ ಪ್ಲಾಸ್ಮಾ ದಾನ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News