ಪುದುಚೇರಿ ಮುಖ್ಯಮಂತ್ರಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ

Update: 2020-09-18 12:56 GMT

ಉಡುಪಿ, ಸೆ.18: ಪುದುಚೇರಿಯ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರು ಇಂದು ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಆಗಮಿಸಿದ ನಾರಾಯಣ ಸ್ವಾಮಿ ಅವರು, ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಪುದುಚೇರಿ ಮುಖ್ಯಮಂತ್ರಿಗಳು ಚಂಡಿಕಾ ಹೋಮದಲ್ಲಿ ಭಾಗಿಯಾದರು. ಚಂಡಿಕಾ ಹೋಮದಲ್ಲಿ ಅವರು ಪೂರ್ಣಾಹುತಿ ಸಲ್ಲಿಸಿದರು.
ನಾರಾಯಣ ಸ್ವಾಮಿ ಅವರನ್ನು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಹಾಗೂ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಸುತಗುಂಡಿ ಅವರು ಸ್ವಾಗತಿಸಿ, ಗೌರವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News