ಹಿರಿಯ ಪತ್ರಕರ್ತ, ರಂಗಕರ್ಮಿ ನಾಗರಾಜ್ ದೀಕ್ಷಿತ್ ನಿಧನ

Update: 2020-09-18 13:28 GMT

ಬೆಂಗಳೂರು, ಸೆ.18: ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿಯಾಗಿದ್ದ ನಾಗರಾಜ್ ದೀಕ್ಷಿತ್(55) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೀಕ್ಷಿತ್ ಅವರು 3 ದಶಕಗಳಿಗಿಂತಲೂ ಹೆಚ್ಚಿನ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.

ರಂಗಕರ್ಮಿಯಾಗಿದ್ದ ಅವರು ಹಲವು ಪಾತ್ರಗಳನ್ನು ರಂಗದ ಮೇಲೆ ಸಮರ್ಥವಾಗಿ ನಿಭಾಯಿಸಿದ್ದರು. ದೀಕ್ಷಿತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ನಿವಾಸದಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿತು.

ಮಂಡ್ಯದ ಪೌರವಾಣಿ, ಜನವಾಹಿನಿ, ಉಷಾಕಿರಣ, ದೂರದರ್ಶನ, ಜನಶ್ರೀ ಮತ್ತು ಟಿವಿ9ಯಲ್ಲಿ ಕೆಲಸ ನಿರ್ವಹಿಸಿದ್ದ ಅವರು, ತಮ್ಮದೇ ಆದ ಛಾಪು ಮೂಡಿಸಿದ್ದರು.

ಸಿಎಂ ಬಿಎಸ್‍ವೈರಿಂದ ಸಂತಾಪ: ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದೀಕ್ಷಿತ್ ನಿಧನದಿಂದ ಮಾಧ್ಯಮರಂಗ ಪ್ರತಿಭಾವಂತರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News