ಕೊಲ್ಲರಕೋಡಿ: ಎಸ್ಸೆಸ್ಸೆಫ್ ನಿಂದ ಧ್ವಜ ದಿನ ಕಾರ್ಯಕ್ರಮ

Update: 2020-09-19 05:18 GMT

ಮಂಜನಾಡಿ, ಸೆ.19: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಧ್ವಜ ದಿನಾಚರಣೆಯ ಪ್ರಯುಕ್ತ ಎಸ್ಸೆಸ್ಸೆಫ್ ಕೊಲ್ಲರಕೋಡಿ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಕೊಲ್ಲರಕೋಡಿ ನೂರುಲ್ ಹುದಾ ಮಸ್ಜಿದ್ ತಖ್ವಾ ಆವರಣದಲ್ಲಿ ನಡೆಯಿತು.

ನೂರುಲ್ ಹುದಾ ಮಸ್ಜಿದ್ ತಖ್ವಾ ಅಧ್ಯಕ್ಷ ಇಬ್ರಾಹಿಂ ಕುಂಞಿ ಹಾಜಿ ಪಾರೆ ಧ್ವಜಾರೋಹಣ ನೆರವೇರಿಸಿದರು. ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕೊಲ್ಲರಕೋಡಿ ಮದರಸ ಸದರ್ ಯಾಕೂಬ್ ಲತೀಫಿ, ಮುಅಲ್ಲಿಂ ಅಬೂಬಕರ್ ಸಅದಿ, ಆಸಿಫ್ ಕೆ.ಎಚ್, ಅನೀಸ್ ಬಳಪು ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News