ಕೂಳೂರು ಬಳಿ ತಡೆಗೋಡೆ ಕುಸಿತ: ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿ ಮೃತ್ಯು

Update: 2020-09-19 07:56 GMT

ಮಂಗಳೂರು, ಸೆ.19: ಕೂಳೂರಿನ ಸೈಂಟ್ ಆ್ಯಂಟನಿ ಚರ್ಚ್‌ನ ತಡೆಗೋಡೆ ಭಾರೀ ಪ್ರಮಾಣದಲ್ಲಿ ಕುಸಿದ ಪರಿಣಾಮ ಕಾರ್ಮಿಕನೋರ್ವ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ನೀರುಮಾರ್ಗ ನಿವಾಸಿ ಉಮೇಶ್(37) ಎಂದು ಗುರುತಿಸಲಾಗಿದೆ. ಇವರು ತಡೆಗೋಡೆ ಕುಸಿದ ಸ್ಥಳದಲ್ಲೆ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಮಣ್ಣಿನಡಿಗೆ ಸಿಲುಕಿದ್ದ ಉಮೇಶ್ ರನ್ನು ಮೇಲಕ್ಕೆತ್ತಿದರೂ, ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News