ಕೊಡಗು ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ: ರೆಡ್ ಅಲರ್ಟ್ ಘೋಷಣೆ

Update: 2020-09-19 12:53 GMT

ಮಡಿಕೇರಿ, ಸೆ.19: ಆಗಸ್ಟ್ ತಿಂಗಳ ಅತಿವೃಷ್ಟಿಯಿಂದ ಚೇತರಿಸಿಕೊಳ್ಳುವ ಹಂತದಲ್ಲೇ ಮತ್ತೆ ಕೊಡಗಿನಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯಲು ಆರಂಭಿಸಿವೆ. ಮಡಿಕೇರಿ ತಾಲೂಕಿನ ನಾಪೋಕ್ಲು, ಸಂಪಾಜೆ, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಕಾವೇರಿ ನದಿ ಸೇರಿದಂತೆ ಇತರ ಉಪ ನದಿಗಳಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. 

ದಕ್ಷಿಣ ಕೊಡಗಿನಲ್ಲೂ ಬೆಳಗ್ಗೆಯಿಂದಲೇ ಮಳೆಯಾಗುತ್ತಿದ್ದು, ಸೋಮವಾರಪೇಟೆ ತಾಲೂಕಿನಲ್ಲೂ ಮಳೆ ತೀವ್ರತೆಯನ್ನು ಪಡೆದುಕೊಂಡಿದೆ.

ಜಿಲ್ಲೆಯಲ್ಲಿ ಸೆ.21ರ ಬೆಳಗ್ಗೆ 8.30 ಗಂಟೆಯವರೆಗೆ ಆರೆಂಜ್ ಅಲರ್ಟ್ ಮತ್ತು ಸೆ.21ರ ಬೆಳಗ್ಗೆಯಿಂದ ಸೆ.22ರ ಬೆಳಗ್ಗೆ ವರೆಗೆ ರೆಡ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24x7 ಕಂಟ್ರೋಲ್ ರೂ.08272-221077, ವಾಟ್ಸ್ ಆಪ್ ನಂ.8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News