ಮೋದಿಗೆ ಪ್ರತಿಭಟನಾನಿರತ ರೈತರ ಮನವೊಲಿಸಲು ಯಾಕೆ ಸಾಧ್ಯವಾಗುತ್ತಿಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Update: 2020-09-19 13:23 GMT
Photo: facebook/priyank.kharge

ಬೆಂಗಳೂರು, ಸೆ.19: ಕೇಂದ್ರ ಸರಕಾರ ಜಾರಿ ಮಾಡಿರುವ ಕೃಷಿ ಸೇವೆ ಹಾಗೂ ಬೆಲೆ ನಿಗದಿ ಮಸೂದೆ ರೈತರ ಪರವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಪ್ರತಿಭಟನಾನಿರತ ರೈತರನ್ನು ಮನವೊಲಿಸಲು ಯಾಕೆ ಸಾಧ್ಯವಾಗುತ್ತಿಲ್ಲವೆಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಶ್ವದ ನಾಯಕರೆಲ್ಲರನ್ನು ಮೆಚ್ಚಿಸುವಂತೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿಗೆ, ಕೇಂದ್ರ ಸಚಿವರು ಎಪಿಎಂಸಿ ತಿದ್ದುಪಡಿ ಕಾಯ್ದೆವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತ ಸಮುದಾಯವನ್ನು ಯಾಕೆ ಮನವೊಲಿಸಲು ಮುಂದಾಗುತ್ತಿಲ್ಲವೆಂದು ಪಶ್ನೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News