ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗದ ‘ಮಹಾನಾಯಕ’ ಧಾರಾವಾಹಿ: ಸಾಮಾಜಿಕ ಜಾಲತಾಣದಲ್ಲಿ ಜನರ ಅಸಮಾಧಾನ

Update: 2020-09-20 17:59 GMT

ಬೆಂಗಳೂರು, ಸೆ.20: ಝೀ ಕನ್ನಡ ವಾಹಿನಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜೀವನ ಕಥೆಯನ್ನು ಹೇಳುವ ‘ಮಹಾನಾಯಕ’ ಧಾರಾವಾಹಿಯು‌ ರವಿವಾರ ಪ್ರಸಾರವಾಗದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಶನಿವಾರ ಮತ್ತು ರವಿವಾರ ಸಂಜೆ 6:30ಕ್ಕೆ ಪ್ರಸಾರವಾಗುತ್ತಿದ್ದ ಧಾರಾವಾಹಿ ರವಿವಾರ ಪ್ರಸಾರವಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಅಭಿಮಾನಿಗಳು ವಾಹಿನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿದ ಝೀ ವಾಹಿನಿ, "ಪ್ರೀತಿಯ ವೀಕ್ಷಕರೇ... ಇಂದು ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಧಾರವಾಹಿ ಪ್ರಸಾರವಾಗದಿರುವುದಕ್ಕೆ ವಿಷಾದಿಸುತ್ತೇವೆ. ಎಂದಿನಂತೆ ಮುಂದಿನ ವಾರದಿಂದ ಶನಿವಾರ ಹಾಗೂ ಭಾನುವಾರ ಸಂಜೆ 6:30ಕ್ಕೆ "ಮಹಾನಾಯಕ" ಪ್ರಸಾರವಾಗಲಿದೆ. ತಪ್ಪದೇ ವೀಕ್ಷಿಸಿ." ಎಂದು ಫೇಸ್ ಬುಕ್ ನಲ್ಲಿ ತಿಳಿಸಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News