ಪುತ್ತೂರು: ಗಾಂಜಾ ಸೇವನೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ

Update: 2020-09-21 06:51 GMT

ಪುತ್ತೂರು, ಸೆ.21: ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿದ್ದ ವೇಳೆ ಬಂಧಿತರಾಗಿರುವ ಆರೋಪಿಗಳಿಬ್ಬರನ್ನು ನ್ಯಾಯಾಲಯ ಒಂದು ದಿನದವಧಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಮಂಜೇಶ್ವರ ತಾಲೂಕು ಉಪ್ಪಳ ಪಪ್ಪಾಯಿತೊಟ್ಟಿ ನಿವಾಸಿ ರಹಿಮಾನ್ ಖಾನ್(44) ಹಾಗೂ ಮಂಜೇಶ್ವರ ತಾಲೂಕು ಹೊಸಂಗಡಿ ಬಜ್ಜೆಂಗಳ ನಿವಾಸಿ ಅಬ್ದುಲ್ಲಾ ಎಂಬವರನ್ನು ಗಾಂಜಾ ಸೇವಿಸಿದ ಆರೋಪದಲ್ಲಿ  ಸೆ.19ರಂದು ಸಂಜೆ ಮುಕ್ರಂಪಾಡಿ ಬಸ್ ತಂಗುದಾಣದ ಬಳಿ ಪೊಲೀಸರು ಬಂಧಿಸಿ, ಅವರಲ್ಲಿದ್ದ ಕೇರಳ ನೋಂದಣಿಯ ಕಾರೊಂದನ್ನು ವಶಪಡಿಸಿಕೊಂಡಿದ್ದರು.

 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಕುರಿತು ವೈದ್ಯರು ವರದಿ ನೀಡಿದ್ದ ಹಿನ್ನಲೆಯಲ್ಲಿ ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News