ಮೀನುಗಾರರಿಗೆ ಎಚ್ಚರಿಕೆ

Update: 2020-09-21 14:00 GMT

ಉಡುಪಿ, ಸೆ.21: ಕರ್ನಾಟಕ ಕರಾವಳಿಯುದ್ದಕ್ಕೂ ಮುಂದಿನ 24 ಗಂಟೆಗಳಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಭಾರತ ಹವಾಮಾನ ಇಲಾಖೆ ಹಾಗೂ ಹವಾಮಾನ ಕೇಂದ್ರ ಬೆಂಗಳೂರು ನೀಡಿದ ಮುನ್ಸೂಚನೆಯಂತೆ ಮಂಗಳೂರಿನಿಂದ ಕಾರವಾರದವರೆಗೆ ಸೆ.22ರ ಮಂಗಳವಾರ ರಾತ್ರಿ 11:30ರವರೆಗೆ 3.2ಮಿ.ನಿಂದ 4.0ಮಿ. ಎತ್ತರದ ತೆರೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದ್ದು, ಪ್ರವಾಹದ ಮೇಲ್ಮೈ ವೇಗವು ನಿಮಿಷಕ್ಕೆ 30ರಿಂದ 51ಸೆ.ಮಿ. ಆಗಿರುತ್ತದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News