ಉಡುಪಿ ಜಿಲ್ಲೆಗೆ ಗರಿಷ್ಟ ಪರಿಹಾರಕ್ಕೆ ರಮೇಶ್ ಕಾಂಚನ್ ಆಗ್ರಹ
Update: 2020-09-21 15:27 GMT
ಉಡುಪಿ, ಸೆ.21: ಜಿಲ್ಲೆಯಲ್ಲಿ ಉಂಟಾದ ಪ್ರವಾಹವು ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆ ದಂತಾಗಿದೆ. ವಿವಿಧ ಇಲಾಖೆಗಳಿಗೆ ಕೋಟ್ಯಾಂತರ ರೂ. ನಷ್ಟ ಉಂಟಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ತುರ್ತಾಗಿ ಸ್ಪಂದಿಸಿ ಜಿಲ್ಲೆಗೆ ಗರಿಷ್ಟ ಪರಿಹಾರ ವನ್ನು ಘೋಷಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ನಗರಸಭಾ ಸದಸ್ಯ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
ಕೇಂದ್ರದಿಂದಲೂ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಒತ್ತಡ ಹಾಕಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಸರಕಾರ ಮತ್ತು ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು ಗರಿಷ್ಟ ಪರಿಹಾರಕ್ಕೆ ಪ್ರಯತ್ನಿಸಬೇಕು. ಈ ಮೂಲಕ ಜನರ ನೆರವಿಗೆ ಸರಕಾರ ಧಾವಿಸಬೇಕು ಎಂದು ಅವರು ಪ್ರಕಟಣೆ ಯಲ್ಲಿ ಒತ್ತಾಯಿಸಿದ್ದಾರೆ.