ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ

Update: 2020-09-21 15:38 GMT

ಮಂಗಳೂರು, ಸೆ.21: ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಉಳ್ಳಾಲ ನಗರಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಮೂಡುಬಿದಿರೆ ಪುರಸಭೆ ಮತ್ತು ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ಥಳೀಯ ಸಂಸ್ಥೆಗಳ ವಿವರ: ಕೋಟೆಕಾರ್ ಪಟ್ಟಣ ಪಂಚಾಯತ್, ಹುದ್ದೆಯ ವಿವರ- 1, ಉಳ್ಳಾಲ ನಗರ ಸಭೆ- 3, ಮೂಡುಬಿದಿರೆ ಪುರಸಭೆ- 1, ಬಂಟ್ವಾಳ ಪುರಸಭೆ- 1. ಅರ್ಜಿ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಹಾಗೂ ದೂ.ಸಂ.: 0824-248173, 2455999ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಯಮುನಾ ಡಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News