ಮಂಡ್ಯ: ಟಿಪ್ಪರ್ ಹರಿದು ತಾಯಿ, ಮಗು ಮೃತ್ಯು

Update: 2020-09-21 16:49 GMT
ಶಶಿಕಲಾ, ಲಾವಣ್ಯ

ಮಂಡ್ಯ, ಸೆ.22: ಟಿಪ್ಪರ್ ಲಾರಿ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ.

ತಾಲೂಕಿನ ಹಾಡ್ಯ ಗ್ರಾಮದ ಶಶಿಕಲಾ(35), ಮಗು ಲಾವಣ್ಯ ಮೃತಪಟ್ಟವರು. ಶಶಿಕಲಾ ಅವರ ಪತಿ ದೇವರಾಜು(45) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಗಳು ಲಾವಣ್ಯಗಳಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಕೊಡಿಸಲು ದೇವರಾಜು ದಂಪತಿ  ದ್ವಿಚಕ್ರ ವಾಹನದಲ್ಲಿ ಮಂಡ್ಯದ ಖಾಸಗಿ ಆಸ್ಪತ್ರೆಗೆ ಬಂದು ವಾಪಸ್ಸು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಹೊಳಲು ಗ್ರಾಮದ ಸರ್ಕಲ್‍ನಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಢಿಕ್ಕಿಯೊಡೆದ ಪರಿಣಾಮ ತಾಯಿ, ಮಗುವಿನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರು. ಗಾಯಗೊಂಡ ದೇವರಾಜು ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News