ಸೆ.24ರಿಂದ ಎಸಿಬಿ ಅಧಿಕಾರಿಗಳ ಭೇಟಿ

Update: 2020-09-22 17:05 GMT

ಮಂಗಳೂರು, ಸೆ.22: ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೆ. 24, 28 ಮತ್ತು 30 ರಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.

ಸೆ.24ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡುಬಿದಿರೆ ಸರಕಾರಿ ನಿರೀಕ್ಷಣಾ ಮಂದಿರ, ಸೆ.28ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ರಿಂದ ಸಂಜೆ 4:30 ಗಂಟೆಯವರೆಗೆ ಪುತ್ತೂರು ಸರಕಾರಿ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.

ಸೆ.30ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ರಿಂದ ಮಧ್ಯಾಹ್ನ 4:30 ಗಂಟೆಯವರೆಗೆ ಬಂಟ್ವಾಳ ಸರಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, 2ನೇ ಮಹಡಿ, ಮೂಡ ಬಿಲ್ಡಿಂಗ್, ಉರ್ವಸ್ಟೋರ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು- 575006, ದೂ.ಸಂ.: 0824- 2483000ನ್ನು ಸಂಪರ್ಕಿಸುವಂತೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಶ್ಯಾಮ್ ಸುಂದರ್ ಎಚ್.ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News