ಕೊರೋನ ಸೋಂಕಿಗೆ ಆರ್‌ಟಿಒ ಅಧೀಕ್ಷಕ ಬಲಿ

Update: 2020-09-22 18:07 GMT

ಬೆಂಗಳೂರು, ಸೆ.22: ಕೊರೋನ ಸೋಂಕು ತಗಲಿದ ಹಿನ್ನೆಲೆ ಆರ್‌ಟಿಒ ಕಚೇರಿಯ ಅಧೀಕ್ಷಕ ಮೃತಪಟ್ಟಿರುವ ಘಟನೆ ಇಲ್ಲಿನ ನೆಲಮಂಗಲದಲ್ಲಿ ನಡೆದಿದೆ.

ಆರ್‌ಟಿಒ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 59 ವರ್ಷದ ಗಂಗಾಧರ್ ಕಳೆದ 3 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೋನ ಪಾಸಿಟಿವ್ ಎಂದು ತಿಳಿದುಬಂದಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಧಿಕಾರಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News