​ಸೆ. 26: ದರ್ಬೆಯಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಉದ್ಘಾಟನೆ

Update: 2020-09-23 09:43 GMT

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ನೆಹರೂ ನಗರ ಇವುಗಳ ಸಹಯೋಗದಲ್ಲಿ ಶಿವಂಜನ್ ಎಂ ಅವರ ಮಾಲಿಕತ್ವದಲ್ಲಿ ನೂತನ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಸೆ.26ರಂದು ಪುತ್ತೂರು ನಗರದ ದರ್ಬೆಯಲ್ಲಿ ಉದ್ಘಾಟಿಸಲಾಗುವುದು ಎಂದು ವಿವೇಕಾನಂದ ಪಾಲಿಟೆಕ್ನಿಕ್‍ನ ಸಂಚಾಲಕ ಮಹಾದೇವ ಶಾಸ್ತ್ರಿ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದರ್ಬೆಯ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಕಟ್ಟಡದಲ್ಲಿ ನೂತನ ಜನೌಷಧಿ ಕೇಂದ್ರ ಕಾರ್ಯಾಚರಿ ಸಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘವು 10 ಜನೌಷಧಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಈ ಹಿಂದೆ ಒಪ್ಪಂದ ಮಾಡಿಕೊಂಡಿತ್ತು. ಆದರೆ 10 ಕೇಂದ್ರವನ್ನು ಪೂರ್ಣಗೊಳಿಸಿದ ಮುಂದುವರಿದು ಇದೀಗ ದರ್ಬೆಯಲ್ಲಿ 13ನೇ ಕೇಂದ್ರ ಸ್ಥಾಪನೆಯಾಗಲಿದೆ.

ನೂತನ ಜನೌಷಧಿ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಪಾಲಿಟೆಕ್ನಿಕ್ ಅಧ್ಯಕ್ಷ ಪ್ರಸನ್ನ ಎನ್ ಭಟ್ ಮತ್ತು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಹಿರಿಯ ಮಾರುಕಟ್ಟೆ ಅಧಿಕಾರಿ ಡಾ. ಅನಿಲಾ ದೀಪಕ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಪ್ರಾಂಶುಪಾಲ ಗೋಪಿನಾಥ ಶೆಟ್ಟಿ, ಜನೌಷಧಿ ಕೇಂದ್ರದ ಮಾಲಿಕ ಶಿವರಂಜನ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News